Friday, July 30, 2021

ಆತ್ಮ ಸಂಯಮ

ನಾಲಿಗೆ ತಿಳಿದರೂ ಬೇವು-ಬೆಲ್ಲದ ರುಚಿಯ,

ಸದಾ ಬಯಸುವುದು ಮಾತ್ರ ಬೆಲ್ಲದ ಸ್ನೇಹವ.

ಮನವೇ ಆದರೂ ನೋವು-ಸಂತಸದ ಒಡೆಯ,

ಸದಾ ಬಯಸುವುದು ಮಾತ್ರ ನೋವಿನ ಕ್ಷಣವ.


ನಾಲಿಗೆಗೆ ಕಹಿ ಬೇಡ, ಮನಕ್ಕೆ ಸಿಹಿ ಬೇಡ,

ಒಂದೇ ದೇಹದಲ್ಲಿದ್ದರೂ, ಇಬ್ಬರ ಬಯಕೆಯು ವಿರುದ್ಧ.

ಏತಕ್ಕೆ ಈ ರೀತಿ ಎಂಬುದಕ್ಕೆ ಉತ್ತರ ನಿಗೂಢ!

ನಿಗೂಢತೆಯ ಭೇದಿಸಲು ಆತ್ಮವಾಗಬೇಕು ಪರಿಶುದ್ಧ.

                          ----ಚಿನ್ಮಯಿ

No comments:

Post a Comment