Tuesday, July 4, 2023

ಅರುಣರಾಗದ ಅನುರಾಗ

ಚಿತ್ರಕ್ಕೆ ಪದ್ಯ- ೬೯

ಗೋಧೂಳಿ ವೇಳೆಯಲಿ ತಂಗಾಳಿ ಬೀಸುತಲಿ,

ಬಾನಿಗೆ ಭಾನು ಉಡಿಸುವಾಗ ಕೇಸರಿ—

ಒಲವ ಮಂಟಪದಡಿ ನಮ್ಮಿಬ್ಬರ ಮಿಲನ.

ನದಿಯೊಳ ಸವಿದೆವು ಆ ಸುಂದರ ಕ್ಷಣ.

ಮೇಘಗಳು ಗದರಿ ತಾ ಬಿಕ್ಕಿ ಬಿಕ್ಕಿ ಅಳುವಾಗ,

ಇಳೆಯು ಆಗಸ ತಾಕಿ ಉಡುವಂತೆ ಹಸಿರ—

ನಮ್ಮಿಬ್ಬರ ಸಿಹಿ ಕಾದಾಟದ ಸವಿ ಸಮಯ.

ಅದರಿಂದಿರೋ ಮಧುರ ಸುಮಧುರ ಪ್ರಣಯ.

ಶಶಿಯ ಆಗಮನ ಬೇಡವೆನಿಸುವಷ್ಟು,

ಒಳ ಮನಸ್ಸನ್ನು ಹೊಕ್ಕಿರಲು ವಾತಾವರಣ—

ಈಗೆಯೇ ಸದಾ ಇದ್ದುಬಿಟ್ಟರೇ ಅದೆಷ್ಟು ಸಂತಸ!

ಅದಾಗದೆಂದಿಗೂ ಜೊತೆ ಆವರಿಸಿರಲು ನೀರಸ...!


        ----ಚಿನ್ಮಯಿ

No comments:

Post a Comment