Friday, July 21, 2023

ತ್ರಿಪದಿ- ೨

ಮೋರಿಯೊಳ ಮಳೆ ಮಿಂದರೂ ಶುಚಿ ಆಪುದಿಲ್ಲ.

ಸೇರಬೇಕು ಆತ್ಮದೊಳು ಪರಮಾತ್ಮನ ಸದ್ಭಾವನೆ—

ಅರಿವಿನ ಶುಚಿಯ ಉಗಮಕ್ಕೆ ಚಿನ್ಮಯಿ.


"ಭಾವಾರ್ಥ:"

ಮೋರಿಯೊಳಗೆ ಅದೆಷ್ಟೇ ಮಳೆ ನೀರು ಸೇರಿದರೂ ಮೇಲ್ನೋಟಕ್ಕೆ ಶುಚಿ ಕಾಣುವುದೇ ಹೊರತು ಆಳದಲ್ಲಿ ಕೊಳಕು ಆಗೆಯೇ ಕೊಳೆತು ನಾರುತ್ತಿರುತ್ತದೆ ಹಾಗೂ ತನ್ನ ಸೇರೋ ಮಳೆ ನೀರನ್ನು ಕೊಳಕು ಮಾಡುತ್ತದೆ. ಆಳದಿಂದ ಶುಚಿಯಾದಾಗಲೇ ಶುದ್ಧ ನೀರಿನ ರೂಪ ಪಡೆಯುವುದು.

ಹಾಗೆಯೇ, ಮನುಷ್ಯರ ವಿಚಾರದಲ್ಲೂ ಸಹ ಮೇಲ್ನೋಟಕ್ಕೆ ಆಡಂಬರ ಪೂಜೆ-ಪನಸ್ಕಾರಗಳು ಅದೆಷ್ಟೇ ಮಾಡಿದರೂ ಸಹ ಪರಮಾತ್ಮನು ಒಲಿಯಲ್ಲ, ಅಂಧಕಾರವ ದೂಡಿ ಪರಿಶುದ್ಧತೆ ಹಾಗೂ ಸದ್ಭಾವದ ಅರಿವಿಂದ ಆತ್ಮದಲ್ಲಿ ನೆಲೆಸಿಹ ಪರಮಾತ್ಮನನ್ನು ಒಲಿಸಿದರೇ ಭಕ್ತಿಯ ಉಗಮದಿಂದ ಪರಮಾತ್ಮನ ಸಾಕ್ಷಾತ್ಕಾರವಾಗುವುದು.


              ----ಚಿನ್ಮಯಿ

No comments:

Post a Comment